ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ನಲ್ಲಿ ಶಾಸಕರು ಹಾಗೂ ಸಚಿವರ ಅಸಮಾಧಾನ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಸಂಪುಟ ಸಚಿವರು ದೆಹಲಿ ವಿಮಾನ ಏರಿದ್ದಾರೆ.
ಹೈಕಮಾಂಡ್ನಿಂದ ಬುಲಾವ್ ಬಂದಿದೆ, ಹಾಗಾಗಿ ಹೋಗ್ತಿದ್ದೇವೆ, ಸಭೆಯಲ್ಲಿ ಭಾಗಿಯಾಗ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈಗಾಗಲೇ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಸಿದ್ದು ಹಾಗೂ ಸಚಿವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಲೋಕಸಭಾ ಚುನಾವಣಾ ಸಿದ್ಧತೆ ವಿಷಯವಾಗಿ ಚರ್ಚೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಜತೆ ಸಭೆ ನಡೆಯಲಿದೆ.