ಹೊಸ ದಿಗಂತ ವರದಿ, ವಿಜಯಪುರ:
ಹೈ ಕಮಾಂಡ್ ಒಪ್ಪಿಗೆ ನೀಡಿದರೆ ನಾಗಠಾಣ ಮೀಸಲು ಮತಕ್ಷೇತ್ರದಿಂದ ಬರುವ ಚುನಾವಣೆಯಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ ಹೈಕಮಾಂಡ್ ತೀರ್ಮಾನ ಮುಖ್ಯ ಆಗಿದೆ. ನಿನಗೆ ವಯಸ್ಸು ಆಗಿದೆ. ಚುನಾವಣೆಯಲ್ಲಿ ನಿಲ್ಲಬೇಡ ಎಂದರೆ ಒಪ್ಪಿಕೊಂಡು ಮನೆಯಲ್ಲಿ ಇರುತ್ತೇನೆ ಎಂದರು.
ನನಗೆ ಅಧಿಕಾರ ಮುಖ್ಯ ಅಲ್ಲ. ನನಗೆ ಹೈಕಮಾಂಡ್ ಹಾಗೂ ಹಿರಿಯ ನಾಯಕರ ತೀರ್ಮಾನ ಮುಖ್ಯ ಎಂದರು.