ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ಕಾಂಗ್ರೆಸ್ ಸೇರಲು ಅವರ ಬಳಿ ಹೋಗಿಲ್ಲ. ನಾನು ಕಾಂಗ್ರೆಸ್ಗೆ ಸೇರಬೇಕೇ ಎಂದು ಯೋಚಿಸುತ್ತಿದ್ದೇನೆ. ಆದರೆ, ನನ್ನ ಬೆಂಬಲಿಗರು ಕಾಂಗ್ರೆಸ್ ಸೇರುವ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.
ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುವ ಸಂದರ್ಭ ಬಂದಾಗ ಕಾಯ್ದುಕೊಳ್ಳಲೇಬೇಕು. ಯಾವ ರಾಜಕೀಯ ಪಕ್ಷಗಳನ್ನು ಯಾರಿಗೂ ಸಾಲ ಕೊಟ್ಟಿಲ್ಲ. ಎಲ್ಲ ರಾಜಕೀಯ ಪಕ್ಷಗಳಲ್ಲೂ ವಲಸಿಗರಿದ್ದಾರೆ. ಗುಜರಾತ್, ಹಿಮಾಚಲಪ್ರದೇಶದಲ್ಲಿ ಏನಾಯಿತು ಎಂಬುದು ಎಲ್ಲರಿಗೂ ತಿಳಿದಿದೆ.
ನಾನು ಒಂದು ಮತ ಹಾಕದಿದ್ದಕ್ಕೆ ಮಾತನಾಡುತ್ತಾರೆ, ಅವರು 6 ಮತ ಹಾಕಿ ಅಮಾನತುಗೊಂಡರು.ಅದರ ಬಗ್ಗೆ ಯಾರೂ ಮಾತನಾಡುವುದಿಲ್ಲ. ಕರ್ನಾಟಕದಲ್ಲೂ ಇದೇ ನೀತಿ ಇರಬೇಕು. ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶಕ್ಕೂ ಒಂದೇ ಇರಬೇಕು ಎಂದರು.