Monday, September 25, 2023

Latest Posts

ಚಂದ್ರಬಾಬು ನಾಯ್ಡು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್​

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಹೈಕೋರ್ಟ್​ನಲ್ಲಿ ಬುಧವಾರ​ ನಡೆಯಿತು.

ಸಿಐಡಿ ಅಧಿಕಾರಿಗಳು ದಾಖಲಿಸಿರುವ ಪ್ರಕರಣ ಮತ್ತು ಎಸಿಬಿ ನ್ಯಾಯಾಲಯ ವಿಧಿಸಿರುವ ನ್ಯಾಯಾಂಗ ಬಂಧನವನ್ನು ರದ್ದುಪಡಿಸುವಂತೆ ನಾಯ್ಡು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಸಂಬಂಧ ಚಂದ್ರಬಾಬು ನಾಯ್ಡು ಅವರ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೇಳಿದೆ. ಇದಕ್ಕೆ ನ್ಯಾಯಾಲಯವು ಸೆಪ್ಟೆಂಬರ್​ 18ರ ವರೆಗೆ ವರದಿ ಸಲ್ಲಿಸಲು ಗಡುವು ನೀಡಿದೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್​ 19 ಮುಂದೂಡಿಕೆ ಮಾಡಿದೆ.

ಅಲ್ಲಿಯವರೆಗೆ ಎಸಿಬಿ ನ್ಯಾಯಾಲಯಕ್ಕೆ ಸಿಐಡಿ ಸಲ್ಲಿಸಿರುವ ನ್ಯಾಯಾಂಗ ಬಂಧನದ ಅರ್ಜಿಯನ್ನು ವಿಚಾರಣೆ ನಡೆಸದಂತೆ ಹೈಕೋರ್ಟ್​ ಆದೇಶಿಸಿದೆ.

ಇದಕ್ಕೂ ಮುನ್ನಚಂದ್ರಬಾಬು ನಾಯ್ಡು ಅವರನ್ನು 5 ದಿನಗಳ ನ್ಯಾಯಾಂಗ ಬಂಧನ ಕೋರಿ ವಿಜಯವಾಡ ಎಸಿಬಿ ನ್ಯಾಯಾಲಯದಲ್ಲಿ ಸಿಐಡಿ ಅರ್ಜಿ ಸಲ್ಲಿಸಿತ್ತು.

ಇನ್ನರ್​ ರಿಂಗ್​ ರೋಡ್​ ಪ್ರಕರಣ
ಚಂದ್ರಬಾಬು ನಾಯ್ಡು ವಿರುದ್ಧ ದಾಖಲಾಗಿದ್ದ ರಾಜಧಾನಿಯ ಇನ್ನರ್​ ರಿಂಗ್​ ರೋಡ್ ಪ್ರಕರಣದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯವು, ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್​ 19ಕ್ಕೆ ಮುಂದೂಡಿತು. ಈ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ನಾಯ್ಡು ಪರ ವಕೀಲರು ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಗೃಹ ಬಂಧನ ಅರ್ಜಿಯನ್ನು ವಿಜಯವಾಡ ಎಸಿಬಿ ಕೋರ್ಟ್ ಮಂಗಳವಾರ​ ವಜಾಗೊಳಿಸಿತ್ತು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!