ಹೊಸದಿಗಂತ ಡಿಜಿಟಲ್ ಡೆಸ್ಕ್;
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ್ಯ ಮಹೇಶ್ ಜೋಶಿ ಅವರಿಗೆ ಅಗತ್ಯವಿದ್ದರೆ ಸೂಕ್ತ ಭದ್ರತೆ ಒದಗಿಸಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೌಖಿಕ ನಿರ್ದೇಶನ ನೀಡಿದೆ.
ನನಗೆ ಜೀವ ಬೆದರಿಕೆ ನನಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಜೋಶಿ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಜೋಶಿ ಪರ ಪದಾಂಕಿತ ಹಿರಿಯ ವಕೀಲ ಎಸ್.ಬಸವರಾಜು ವಾದ ಮಂಡಿಸಿದ್ದರು. ಈ ವೇಳೆ ವಿಚಾರಣೆ ವೇಳೆ, ಜೋಶಿ ಅವರಿಗೆ ಅಗತ್ಯವಿದ್ದರೆ ಸೂಕ್ತ ಭದ್ರತೆಯನ್ನು ಒದಗಿಸಿ ಎಂದು ಪ್ರಾಸಿಕ್ಯೂಷನ್ ಪರ ಹಾಜರಿದ್ದ ರಾಹುಲ್ ಕಾರ್ಯಪ್ಪ ಅವರಿಗೆ ನಿರ್ದೇಶಿಸಿದ ನ್ಯಾಯಪೀಠ ಲಿಖಿತ ಆದೇಶವನ್ನು ಕಾಯ್ದಿರಿಸಿತು.