ಹೊಸದಿಗಂತ ಡಿಜಿಟಲ್ ಡೆಸ್ಕ್:
ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ಇಂದು (ಸೋಮವಾರ) ವಜಾಗೊಳಿಸಿದೆ.
ಇನ್ನರ್ ರಿಂಗ್ ರೋಡ್, ಫೈಬರ್ ನೆಟ್ ಮತ್ತು ಅಂಗಲ್ಲು ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರ ಜಾಮೀನು ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ವಜಾಗೊಳಿಸಿದೆ.
ಈ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಏಕಸದಸ್ಯ ಪೀಠ ಇಂದು ಅರ್ಜಿಯನ್ನು ವಜಾ ಮಾಡಿದೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಸೆ.9ರಂದು ಬಂಧಿಸಿದೆ. ಅವರನ್ನು ರಾಜಮಹೇಂದ್ರವರಂ ಕೇಂದ್ರೀಯ ಕಾರಾಗೃಹದಲ್ಲಿ ಇಡಲಾಗಿದೆ.