ಮನೆ ಆವರಣದಲ್ಲಿ ಗಾಂಜಾ ಗಿಡ: ಹಿರಿಯ ನಾಗರಿಕನಿಗೆ ರಿಲೀಫ್ ಕೊಟ್ಟ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮನೆ ಆವರಣದಲ್ಲಿ ಗಾಂಜಾ ಗಿಡ ಬೆಳೆಸಿದ್ದ 67 ವರ್ಷದ ವ್ಯಕ್ತಿಗೆ ಹೈಕೋರ್ಟ್ ರಿಲೀಫ್ ನೀಡಿದೆ.

2023ರಲ್ಲಿ ಬೆಂಗಳೂರಿನ ಜಯನಗರದ ಚಂದ್ರಶೇಖರ್ ಎಂಬುವರ ಮನೆ ಆವರಣದಲ್ಲಿ ಐದು ಗಾಂಜಾ ಗಿಡಗಳು ಬೆಳೆದಿದ್ದವು. ಈ ಪ್ರಕರಣ ಸಂಬಂಧ ಪೊಲೀಸರು ಚಂದ್ರಶೇಖರ್​ ವಿರುದ್ಧ ಕೇಸ್ ದಾಖಲಿಸಿದ್ದರು. ಆದ್ರೆ, ಇದೀಗ ಆ ಪ್ರಕರಣವನ್ನು ಹೈಕೋರ್ಟ್ ಇಂದು (ಮೇ 05) ರದ್ದುಗೊಳಸಿದೆ.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಹಿರಿಯ ನಾಗರಿಕ ಚಂದ್ರಶೇಖರ್ ವಿರುದ್ಧದ ದೋಷಾರೋಪ ಪಟ್ಟಿಯನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.

ಚಂದ್ರಶೇಖರ್, ತಾನು ಉದ್ದೇಶಪೂರ್ವಕವಾಗಿ ಗಾಂಜಾ ಬೆಳೆದಿಲ್ಲ, ತನ್ನಷ್ಟಕ್ಕೇ ಅದು ಬೆಳೆದಿತ್ತು ಎಂದು ವಾದ ಮಂಡಿಸಿದ್ರು. ಚಂದ್ರಶೇಖರ್ ಪರ ವಾದ ಮಂಡಿಸಿದ ವಕೀಲ ಜಯಶ್ಯಾಮ್ ಜಯಸಿಂಹರಾವ್, ಪರಾಗಸ್ಪರ್ಶದಿಂದಲೂ ತನ್ನಿಂತಾನೇ ಐದು ಗಾಂಜಾ ಬೆಳೆದಿವೆ. ಈ ಬಗ್ಗೆ ಮನೆ ಮಾಲೀಕ ಚಂದ್ರಶೇಖರ್ ಗೆ ಅರಿವಿಲ್ಲ. ಪೊಲೀಸರು ಹೇಳುವಂತೆ 27 ಕೆಜಿ ಗಾಂಜಾ ಸಿಕ್ಕಿಲ್ಲ, ಗಾಂಜಾ ಗಿಡವನ್ನು ಅದರ ಬೇರು, ರೆಂಬೆ ಕೊಂಬೆ, ಎಲೆ ಸಹಿತವಾಗಿ ತೂಕ ಹಾಕಿರುವುದು ಸರಿಯಲ್ಲ. ಗಾಂಜಾವನ್ನು ಪ್ರತ್ಯೇಕಿಸಿ ತೂಕ ಹಾಕಿಲ್ಲ ಹೀಗಾಗಿ ಒಟ್ಟಾರೆ ಪ್ರಕ್ರಿಯೆಯೇ ಕಾನೂನುಬಾಹಿರವೆಂದು ವಾದಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠಅರ್ಜಿದಾರರಿಗೆ ರಿಲೀಫ್ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!