ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದಲ್ಲಿನ ಹಣಕಾಸು ಅವ್ಯವಹಾರ ಆರೋಪ ಸಂಬಂಧ ಅತೃಪ್ತ ವೈಎಸ್ಆರ್ ಕಾಂಗ್ರೆಸ್ ಸಂಸದ ರಘುರಾಮ ಕೃಷ್ಣರಾಜು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಗುರುವಾರ ಹೈಕೋರ್ಟ್ ನಡೆಸಿದೆ.
ಈ ವೇಳೆ ಕೋರ್ಟ್, ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಸಚಿವರು ಮತ್ತು ಐಪಿಎಸ್, ಐಎಎಸ್ ಅಧಿಕಾರಿಗಳು ಸೇರಿದಂತೆ 41 ಜನರಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿದೆ.
ಹಣಕಾಸು ಅವ್ಯವಹಾರದ ಕುರಿತು ಸಿಬಿಐ ತನಿಖೆಗೆ ಕೋರಿ ಸಂಸದ ರಘುರಾಮ ಅರ್ಜಿ ಸಲ್ಲಿಸಿದ್ದಾರೆ. ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 14ಕ್ಕೆ ಮುಂದೂಡಿದೆ.