ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಲೋಕಸಭಾ ಚುನಾವಣೆ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಶಿವಪ್ರಸಾದ್ ತಮ್ಮ ವಿವಾಹ ಪತ್ರಿಕೆಯಲ್ಲಿ ಮೋದಿ ಮತ ನೀಡುವಂತೆ ಮನವಿ ಮಾಡಿದ್ದರು.
ಈ ಸಂಬಂಧ ಫ್ಲೈಯಿಂಗ್ ಸ್ಕ್ವಾಡ್ ಕೇಸ್ ದಾಖಲಿಸಿದ್ದರು. ಈ ಪ್ರಕರಣ ರದ್ದುಕೋರಿ ಶಿವಪ್ರಸಾದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ, ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಚುನಾವಣೆ ನೀತಿ ಸಂಹಿತೆಗಿಂತ ಮೊದಲೇ ಲಗ್ನ ಪತ್ರಿಕೆ ಮುದ್ರಣವಾಗಿರುವ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.
2024 ಮಾರ್ಚ್ 1 ರಂದು ಮದುವೆ ಆಹ್ವಾನ ಪತ್ರಿಕೆ ಮುದ್ರಣವಾಗಿದೆ. ಆದ್ರೆ, ಚುನಾವಣಾ ನೀತಿಸಂಹಿತೆ ಮಾರ್ಚ್ 16 ರಂದು ಜಾರಿಯಾಗಿದೆ. ಹೀಗಾಗಿ ಕೇಸ್ ರದ್ದು ಮಾಡುವಂತೆ ವಕೀಲ ಎಂ.ವಿನೋದ್ ಕುಮಾರ್ ಕೋರ್ಟ್ಗೆ ಮನವಿ ಮಾಡಿದ್ದರು. ಇದನ್ನು ಪರಿಗಣಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಶಿವಪ್ರಸಾದ್ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.