ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಗುವಾಹಟಿ ಹೈಕೋರ್ಟ್ ನಿರಾಕರಿಸಿದೆ.
ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸಮನ್ಸ್ ನೀಡಿತ್ತು. ಆದರೆ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದರಿಂದ ಕೆಳ ನ್ಯಾಯಾಲಯದ ಆದೇಶವನ್ನು ಮರುಸ್ಥಾಪಿಸಿದೆ.
ಇದೀಗ ನವೆಂಬರ್ 19ರಂದು ಕೋರ್ಟ್ ಮುಂದೆ ಸಿಸೋಡಿಯಾ ಹಾಜರಾಗಬೇಕಾಗುತ್ತದೆ.
ಅಸ್ಸಾಂ ಸಿಎಂ ಕುಟುಂಬ ಪಿಪಿಇ ಕಿಟ್ಗಳ ಹಗರಣದಲ್ಲಿ ತೊಡಗಿತ್ತು ಎಂದು ಸಿಸೋಡಿಯಾ ನೀಡಿದ್ದ ಹೇಳಿಕೆ ವಿರುದ್ಧ ಹಿಮಂತ್ ಬಿಸ್ವಾ ಶರ್ಮಾ ಕೋರ್ಟ್ ಮೆಟ್ಟಿಲೇರಿದ್ದರು.