ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಉಂಟಾದ ಹಿಜಾಬ್ ವಿವಾದ ತಾರಕ್ಕೇರಿದ್ದು, ಜನತೆಯಲ್ಲಿ ಶಾಂತಿ ಕಾಪಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಇಂದುದೆಹಲಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸದ್ಯ ಈ ವಿವಾದವು ನ್ಯಾಯಾಪೀಠದ ಮುಂದೆ ಇದ್ದು, ನ್ಯಾಯಾಲಯದ ತೀರ್ಪು ಕಾಯುವಂತೆ ಅವರು ಮನವಿ ಮಾಡಿದರು.
ಇನ್ನೂ ಗಲಾಟೆಯಾಗಿರುವ ಪ್ರದೇಶದಲ್ಲಿ ರಜೆ ನೀಡುವಂತೆ ಸೂಚನೆ ನೀಡಿರುವೆ. ಇಂದು ಸಂಜೆ ಬೆಂಗಳೂರಿಗೆ ತೆರಳಿದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗುವುದು ಅಂತ ತಿಳಿಸಿದರು.
ಇನ್ನೂ ಯಾರು ಕೂಡ ಪ್ರಚೋದನೆ ಮಾಡುವ ಕೆಲಸ ಮಾಡಬಾರದು, ಈಗಾಗಲೇ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ, ಹೈಕೋರ್ಟ್ನಿಂದ ಅಂತಿಮ ಆದೇಶ ಬರುವ ತನಕ ತಾಳ್ಮೆಯಿಂದ ಇರುವಂತೆ ಅವರು ಹೇಳಿದರು.