ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಜಾಬ್-ಕೇಸರಿ ಶಾಲು ವಿವಾದದ ನಡುವೆ ಇಂದಿನಿಂದ ಕಾಲೇಜುಗಳು ಓಪನ್ ಆಗಿವೆ.
ಒಂದು ವಾರದಿಂದ ಬಂದ್ ಆಗಿದ್ದ ಶಾಲೆಗಳು ಇದೀಗ ಕೋರ್ಟ್ ಆದೇಶದ ಮೇರೆಗೆ ತೆರೆದಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ರಾಜ್ಯದ ಎಲ್ಲಾ ಕಾಲೇಜುಗಳ ಮೇಲೆ ಸೂಕ್ಷ್ಮ ನಿಗಾ ಇಡಲಾಗಿದ್ದು, ಶಾಲೆಯ ಸುತ್ತಮುತ್ತ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆಯವರು ಓಡಾಡದಂತೆ ಪೊಲೀಸರು ಕಣ್ಣಿಟ್ಟಿದ್ದಾರೆ.
ಹಿಜಾಬ್ ವಿವಾದದ ನಡುವೆ ಶಾಲೆ ಕೂಡ ಆರಂಭವಾಗಿದ್ದು, ಕೋರ್ಟ್ ಆದೇಶಕ್ಕೆ ತಲೆಕೆಡಿಸಿಕೊಳ್ಳದ ಕೆಲ ವಿದ್ಯಾರ್ಥಿಗಳು ಈಗಲೂ ಹಿಜಾಬ್ ಧರಿಸಿ ಬರುತ್ತಿದ್ದಾರೆ. ಕೆಲ ಶಾಲೆಗಳಲ್ಲಿ ಹಿಜಾಬ್ ಹಾಕಿ ಪ್ರವೇಶಿಸಲು ಅನುಮತಿ ನೀಡಿದ್ದರೆ, ಇನ್ನೂ ಕೆಲವು ಶಾಲೆಗಳಲ್ಲಿ ಅನುಮತಿ ನಿರಾಕರಿಸಲಾಗಿದೆ. ಒಟ್ಟಾರೆ ಹಿಜಾಬ್ ವಿವಾದ ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಈ ಮಧ್ಯೆ ಕಾಲೇಜ್ ಕೂಡ ಆರಂಭವಾಗಿದ್ದು, ಪರಿಸ್ಥಿತಿ ಸೂಕ್ಷ್ಮವಾಗಿದೆ.
ಪೊಲೀಸ್ ಭದ್ರತೆಯಲ್ಲಿ ಕಾಲೇಜು ಆರಂಭಿಸುತ್ತೇವೆ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಮಾತ್ರ ಒಳಹೋಗುವಂತೆ ಪೊಲೀಸರು ಕ್ರಮ ವಹಿಸಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.