ಹಿಜಾಬ್ ವಿವಾದ | ಹೈಕೋರ್ಟ್ ನಿಂದ ವಿಸ್ತೃತ ಪೀಠ ರಚನೆ: ನಾಳೆ ಮಧ್ಯಾಹ್ನ ವಿಚಾರಣೆ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್

ಹಿಜಾಬ್ ವಿವಾದದ ಕುರಿತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ವಿಸ್ತೃತ ಪೀಠದ ಮುಂದೆ ಇಟ್ಟಿದ್ದು, ಇದೀಗ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಆವಸ್ಥಿಯವರು, ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ವಿಸ್ತೃತ ಪೀಠವನ್ನು ರಚಿಸಿದ್ದಾರೆ. ಅಲ್ಲದೇ ಅರ್ಜಿಯ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಆರಂಭವಾಗಲಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಹೈಕೋರ್ಟ್ ಮುಖ್ಯ ನ್ಯಾಯಾಮೂರ್ತಿ ರಿತುರಾಜ್ ಆವಸ್ತಿ ಅವರು, ಹಿಜಾಬ್ ವಿವಾದದ ಅರ್ಜಿಯ ವಿಚಾರಣೆ ಕುರಿತಂತೆ ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡಂತ ವಿಶೇಷ ನ್ಯಾಯಪೀಠವನ್ನು ರಚಿಸಲಾಗಿದೆ. ತಮ್ಮನ್ನು ಒಳಗೊಂಡಂತೆ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್, ಖಾಜಿ ಜೈಬುನ್ನೀಸಾ ಮೊಹಿಯುದ್ಧೀನ್ ಪೀಠ ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಕೈಗೆತ್ತಿಕೊಳ್ಳೋದಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!