ಹಿಜಾಬ್ ವಿವಾದ | ಬುಧವಾರದ ಒಳಗೆ ವಾದ ಮುಗಿಸಿ: ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಹಿಜಾಬ್ ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಮುಸ್ಲಿಂ ಅರ್ಜಿದಾರರಿಗೆ ಬಧುವಾರದೊಳಗೆ(ಸೆ.14) ವಾದ ಮುಗಿಸಲು ಸುಪ್ರೀಂ ಕೋರ್ಟ್ ಸೂಚಿಸಿದೆ. ಅಲ್ಲದೆ ಸೆ.14 ರಿಂದ ವಿಚಾರಣೆ ನಡೆಸುವುದಾಗಿ ಹೇಳಿದೆ.

ಸೆಪ್ಟೆಂಬರ್ 7 ರಂದು ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿತ್ತು. ಬಳಿಕ ಸೆಪ್ಟೆಂಬರ್ 12ಕ್ಕೆ ಮುಂದೂಡಿತ್ತು. ಇದೀಗ ಸೆಪ್ಟೆಂಬರ್ 14ಕ್ಕೆ ಮುಂದೂಡಿದೆ.

ಇಂದಿನ ವಿಚಾರಣೆಯಲ್ಲಿ ಕೆಲ ಮಹತ್ವದ ಅಂಶಗಳ ಕುರಿತು ಬೆಳಕು ಚೆಲ್ಲಲಾಗಿದೆ. ಕರ್ನಾಟಕ ಹೈಕೋರ್ಟ್ ತೀರ್ಪು ಮಕ್ಕಳ ಶಿಕ್ಷಣ ಹಕ್ಕನ್ನು ಉಲ್ಲಂಘಿಸಿಲ್ಲ ಎಂದು ದ್ವಿದಸ್ಯ ಪೀಠದ ಜಸ್ಟೀಸ್ ಹೇಮಂತ್ ಗುಪ್ತಾ ಹಾಗೂ ಸುಧಾಂಶು ಧುಲಿಯಾ ಅಭಿಪ್ರಾಯಪಟ್ಟಿದ್ದಾರೆ.

ಸುಪ್ರೀಂ ಕೋರ್ಚ್‌ ನ್ಯಾ.ಹೇಮಂತ್‌ ಗುಪ್ತಾ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ 23 ಅರ್ಜಿಗಳ ವಿಚಾರಣೆ ಒಟ್ಟಿಗೆ ನಡೆಯುತ್ತಿದೆ. ಅರ್ಜಿದಾರರ ಪರವಾಗಿ ಈಗಾಗಲೇ ಮೂವರು ವಕೀಲರು ವಾದ ಮುಗಿಸಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಅರ್ಜಿಯ 4ನೇ ದಿನದ ವಾದ-ಪ್ರತಿವಾದವನ್ನು ನ್ಯಾಯಪೀಠ ಆಲಿಸಿತು. ಬಳಿಕ ವಿಚಾರಣೆಯನ್ನು ಸೆಪ್ಟೆಂಬರ್ 14ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಸಿಖ್ಖರ ಪೇಟದ ವಿಚಾರವೂ ಪ್ರಸ್ತಾಪವಾಯಿತು. ವಕೀಲ ಪಾಷಾ ಪೇಟದ ವಿಚಾರವನ್ನು ನ್ಯಾಯಪೀಠದ ಮುಂದಿಟ್ಟು ಗಮನಸೆಳೆದರು. ಆಗ ನ್ಯಾ.ಹೇಮಂತ್‌ ಗುಪ್ತಾ, ಸಿಖ್ಖರ ಪೇಟ ಸಿಖ್ ಧರ್ಮದ ಕಡ್ಡಾಯ ಐದು ಅಂಶಗಳ ಭಾಗ. ಇದನ್ನು ಈಗಾಗಲೇ ಸುಪ್ರೀಂಕೋರ್ಚ್‌ ಕೂಡ ಹೇಳಿದೆ. ಸಂವಿಧಾನ ಪೀಠವೂ ಸಿಖ್ಖರು ಪೇಟ ಮತ್ತು ಕಿರ್ಪಾನ್‌ ಧರಿಸುವುದು ಆ ಧರ್ಮದ ಅಗತ್ಯ ಭಾಗ. ಹಾಗಾಗಿ ಸಿಖ್ಖರ ಪೇಟಕ್ಕೆ ಹೋಲಿಸುವುದು ಸರಿ ಅಲ್ಲ ಎಂದರು.
ಆಗ ವಾದ ಮುಂದುವರೆಸಿದ ಪಾಷ, ಮುಸ್ಲಿಂ ಮಹಿಳೆಯರು ಹಿಜಾಬ್‌ ಧರಿಸುವುದು ಕೂಡ ಇದೇ ಆಗಿದೆ ಎಂದರು. ಆಗ ನ್ಯಾ.ಗುಪ್ತಾ ದಯವಿಟ್ಟು ಸಿಖ್ಖರಿಗೆ ಹೋಲಿಕೆ ಮಾಡಬೇಡಿ, ಸಿಖ್ ಧರ್ಮ ಭಾರತೀಯ ಸಂಸ್ಕೃತಿಯೊಂದಿಗೆ ಬೇರೂರಿದೆ ಎಂದರು. ಆಗ ವಕೀಲ ಪಾಷ, ಇಸ್ಲಾಂ ಧರ್ಮವೂ 1400 ವರ್ಷಗಳಿಂದ ಇದೆ. ಹಿಜಾಬ್‌ ಕೂಡ ಪ್ರಸ್ತುತವಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!