ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಚರ್ಚೆಗೆ ಕಾರಣವಾಗಿದ್ದ ಹಿಜಾಬ್ ವಿವಾದದ ಕುರಿತು ಹೈಕೋರ್ಟ್ ತೀರ್ಪು ಹೊರಬಿದ್ದಿದೆ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ರಿದ್ದ ಪೂರ್ಣ ಪೀಠವು ತನ್ನ ತೀರ್ಪು ಪ್ರಕಟಿಸಿದ್ದು, ಸರ್ಕಾರ ಹೊರಡಿಸಿದ್ದ ಸಮವಸ್ತ್ರದ ಆದೇಶವನ್ನು ಎತ್ತಿಹಿಡಿದಿದೆ.
ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ, ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ, ಹಿಜಾಬ್ ಸೇರಿದಂತೆ ಯಾವುದೇ ಧಾರ್ಮಿಕ ವಸ್ತ್ರಗಳನ್ನು ಶಾಲಾಕಾಲೇಜುಗಳಲ್ಲಿ ಧರಿಸಬಾರದು ಎಂಬುದನ್ನು ಸ್ಪಷ್ಟಪಡಿಸಿದೆ. ಈ ನಡುವೆ ಹೈಕೋರ್ಟ್ ತೀರ್ಪಿನ ಕುರಿತು ಹಿಜಾಬ್ ಪರ ಅರ್ಜಿದಾರರ ವಕೀಲ ಶತಭಿಷ ಶಿವಣ್ಣ ಪ್ರತಿಕ್ರಿಯೆ ನೀಡಿದ್ದು, ಹೈಕೋರ್ಟ್ ತೀರ್ಪು ಪ್ರಶ್ನಿಸಿ ಶೀಘ್ರದಲ್ಲೇ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ. ಹೈಕೋರ್ಟ್ ತೀರ್ಪಿನ ಪ್ರತಿ ಲಭ್ಯವಾದ ಬಳಿಕ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಅರ್ಜಿದಾರರ ಪರ ವಕೀಲ ಹೇಳಿಕೆ ನೀಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ