ವಿಜಯಪುರಕ್ಕೂ ಕಾಲಿಟ್ಟ ಹಿಜಾಬ್ ವಿವಾದ: ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

ಹೊಸದಿಗಂತ ವರದಿ, ವಿಜಯಪುರ:

ಹಿಜಾಬ್, ಕೇಸರಿ ಶಾಲಿನ ಹೋರಾಟ ಬಿಸಿಲೂರಿಗೂ ಕಾಲಿಟ್ಟಿದೆ.
ಜಿಲ್ಲೆಯ ಇಂಡಿ ಪಟ್ಟಣದ ಶಾಂತೇಶ್ವರ ಪದವಿ ಪೂರ್ವ ಕಾಲೇಜ್ ಹಾಗೂ ಜಿಆರ್ ಜಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ಕೇಸರಿ ಶಾಲು ಧರಿಸಿ ಕಾಲೇಜಿಗೆ ಬರುವ ಮೂಲಕ ಗಮನ ಸೆಳೆದರು.
ಇದರಿಂದ ತಕ್ಷಣವೇ ಜಾಗೃತರಾದ ಆಡಳಿತ ಮಂಡಳಿ ವಿವಾದಕ್ಕೆ ಕಾರಣವಾಗಬಾರದು ಎಂದು ಶಾಲೆಗೆ ರಜೆ ಘೋಷಿಸಿತು. ಇನ್ನು
ನಾಳೆಯಿಂದ ಸರ್ಕಾರದ ಆದೇಶದಂತೆ ಸಮವಸ್ತ್ರ ಹಾಕಿಕೊಂಡು‌ ಕಾಲೇಜಿಗೆ ಬರುವಂತೆ ಸೂಚನೆ ನೀಡಿ ರಜೆ ಘೋಷಿಸಿದ್ದರಿಂದ ವಿದ್ಯಾರ್ಥಿಗಳು ಮನೆಗೆ ವಾಪಸ್ ತೆರಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!