ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಜಾಬ್ ವಿವಾದ ಕುರಿತು ಮೂರನೇ ದಿನದ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿಂದು ನಡೆಯಿತು. ವಾದ- ಪ್ರತಿವಾದಿಗಳ ಬಳಿಕ ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ(ಸೆ.12 ರಂದು) ಮುಂದೂಡಲಾಗಿದೆ.
ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠ ವಿಚಾರಣೆ ನಡೆಸಿತು.
ಮೊದಲ ದಿನ ವಿಚಾರಣೆಯಲ್ಲಿ ಅರ್ಜಿದಾರರ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ದೇವದತ್ ಕಾಮತ್ ಅವರು, ಬಟ್ಟೆಯ ವಿಚಾರದಲ್ಲಿ ಸರ್ಕಾರ ಮಕ್ಕಳ ಶಿಕ್ಷಣವನ್ನು ಹಾಳು ಮಾಡುತ್ತಿದೆ ಎಂದು ದೂರಿದ್ದರು. ಈ ವೇಳೆ ಪೀಠ, ಮಕ್ಕಳು ಶಾಲೆಯೊಳಗೆ ಮಿಡಿ, ಸ್ಕರ್ಟ್ ಧರಿಸಿ ಬರಬಹುದೇ ಎಂದು ಪ್ರಶ್ನಿಸಿದ್ದರು. ಹೀಗಾಗಿ ಶಿಕ್ಷಣಕ್ಕೂ, ಬಟ್ಟೆಗೂ ಸಂಬಂಧವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.
ಎರಡನೇ ದಿನದ ವಿಚಾರಣೆಯಲ್ಲಿ ‘ಹಿಜಾಬ್ ಧರಿಸುವುದು ಹಕ್ಕು’ ಎಂದು ವಾದ ಮಂಡಿಸಿದಾಗ ಕೋರ್ಟ್, ಧರಿಸುವ ಹಕ್ಕಿದ್ದರೆ, ಧರಿಸದೇ ಇರುವ ಹಕ್ಕೂ ಇದೆಯೇ ಎಂದು ಪ್ರಶ್ನಿಸಿದ್ದರು.