ಹಿಜಾಬ್ ವಿವಾದ: ರಾಜ್ಯದಲ್ಲಿ 3 ದಿನ ಹೈಸ್ಕೂಲ್‌, ಪ.ಪೂರ್ವ, ಪದವಿ ಎಂಜಿನಿಯರ್‌ ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಿಜಾಬ್‌ ವಿವಾದ ರಾಜ್ಯದಲ್ಲಿ ಹೆಚ್ಚಿದ್ದು, ಈ ಹಿನ್ನೆಲೆ ನಾಳೆಯಿಂದ 3 ದಿನ ಹೈ ಸ್ಕೂಲ್‌, ಪ.ಪೂರ್ವ, ಪದವಿ ಎಂಜಿನಿಯರ್‌ ಕಾಲೇಜುಗಳಿಗೆ ಉನ್ನತ ಶಿಕ್ಷಣ ಸಚಿವ ಅಶ್ವತ್‌ ನಾರಾಯಣ್‌ ರಜೆ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಮಾಹಿತಿ ನೀಡಿದ ಅವರು, ನಾಳೆಯಿಂದ 3 ದಿನ ಹೈ ಸ್ಕೂಲ್‌, ಪ.ಪೂರ್ವ, ಪದವಿ ಎಂಜಿನಿಯರ್‌ ಕಾಲೇಜುಗಳಿಗೆ ರಜೆ ನೀಡಲಾಗುವುದು ಎಂದು ಹೇಳಿದರು.
ರಾಹ್ಯದಲ್ಲಿ ಹಿಜಾಬ್‌ ವಿವಾದ ಹೆಚ್ಚಿದ್ದು, ನಿಯಂತ್ರಣಕ್ಕೆ ಸರಕಾರ ಕ್ರಮಕೈಗೊಳ್ಳುತ್ತಿದೆ. ಈ ವಿವಾದ ಹೈ ಸ್ಕೂಲ್‌, ಪ.ಪೂರ್ವ, ಪದವಿ ಎಂಜಿನಿಯರ್‌ ಕಾಲೇಜುಗಳಿಗೆ ಗಳಿಗೆ ವಿಸ್ತರಣೆಯಾಗಬಾರದು ಎನ್ನುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!