ಹೊಸದಿಗಂತ ವರದಿ, ವಿಜಯಪುರ:
ಹಿಜಾಬ್ ವಿವಾದ ಕಾಂಗ್ರೆಸ್ ಗಿಮಿಕ್, ಇದೆಲ್ಲ ಮಾಡಿಸ್ತಿರೋದೆ ಕಾಂಗ್ರೆಸ್. ಕಾಂಗ್ರೆಸ್ ತಂತ್ರ ಫಲಿಸೊಲ್ಲ ಎಂದ ಬೆಳಗಾವಿ ಜಿಲ್ಲೆಯ ರಾಯಭಾಗದ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಹೇಳಿದರು.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಒಡೆದು ಮೂರು ಹೋಳಾಗಿದೆ. ಹಿಜಾಬ್ ವಿವಾದದ ಮೂಲಕ ಮುಂದಿನ ಚುನಾವಣೆಯಲ್ಲಿ ಸೀಟ್ ಬರಬಹುದು ಅನ್ನೋ ಲೆಕ್ಕಾಚಾರ ಕಾಂಗ್ರೆಸ್ ನದ್ದು, ಜನ ಜಾಗೃತರಾಗಿದ್ದಾರೆ, ಅದು ಸಾಧ್ಯವಾಗಲ್ಲ ಎಂದರು.
ಕಾಂಗ್ರೆಸ್ ನಲ್ಲಿ ಮೂರು ಗುಂಪುಗಳಿವೆ, ನೆಲೆ ಕಂಡುಕೊಳ್ಳಲು ಈ ತಂತ್ರವಾಗಿದ್ದು, ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಡಿಕೆಶಿ, ಪರಮೇಶ್ವರ್ ಮೂರು ಗುಂಪುಗಳಾಗಿವೆ ಎಂದರು.