ದಿಗಂತ ವರದಿ ವಿಜಯಪುರ:
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯ ಇಲ್ಲ. ಕುರಾನ್ ನಲ್ಲೂ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೈಕೋರ್ಟ್ ತೀರ್ಪು ನೀಡಿದಾಗಲೇ ಮುಸ್ಲಿಂ ಮುಖಂಡರು, ಆ 6 ಹೆಣ್ಣು ಮಕ್ಕಳಿಗೆ ಬೈದು ಬುದ್ದಿ ಹೇಳಿದ್ದರೆ ಇಂದು ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದರು.
ಸದ್ಯ ದ್ವಿಸದಸ್ಯ ಪೀಠ ವಿಭಿನ್ನ ಅಭಿಪ್ರಾಯ ನೀಡಿದ್ದು, ಅದನ್ನು ಪ್ರಶ್ನೆ ಮಾಡುವ ಹಕ್ಕು ಯಾರಿಗೂ ಇಲ್ಲ. ಸಮಾನತೆಗೆ, ಸಂವಿಧಾನಕ್ಕೆ ಆದ್ಯತೆ ಕೊಡಬೇಕು. 5 ಅಥವಾ 7 ಜನರ ನ್ಯಾಯಾಧೀಶರ ತೀರ್ಪು ಏನಾಗಲಿದೆ ಎಂಬುದು ನೋಡಬೇಕು ಎಂದರು.
ಅಲ್ಲದೇ, 6 ಮಕ್ಕಳಿಗೆ ಬುದ್ದಿ ಹೇಳಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ. ಬೆಂಕಿ ಹಚ್ಚುವ ಕೆಲಸ ಆಗಿದ್ದರಿಂದ ಪರಿಸ್ಥಿತಿ ಇಲ್ಲಿಗೆ ಬಂದಿದೆ ಎಂದು ಟೀಕಿಸಿದರು.