ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಜನತೆ ಕುತೂಹಲದಿಂದ ಕಾಯುತ್ತಿರುವ ಹಿಜಾಬ್ ತೀರ್ಪು ಇಂದು ಪ್ರಕಟವಾಗಲಿದೆ.
ಉಡುಪಿಯ ಕಾಲೇಜ್ವೊಂದರಲ್ಲಿ ಆರಂಭವಾದ ಹಿಜಾಬ್ ವಿವಾದ ಇಡೀ ರಾಜ್ಯಕ್ಕೇ ಹಬ್ಬಿತ್ತು. ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಯಾಗಿದ್ದು, ಹಿಂಸಾಚಾರ ನಡೆದಿತ್ತು. ಶಾಲಾ ಕಾಲೇಜುಗಳಲ್ಲಿ ಧಾರ್ಮಿಕ ಗುರುತು ಸೂಚಿಸುವ ಬಟ್ಟೆಗಳನ್ನು ಧರಿಸುವುದು ಬೇಡ ಎನ್ನುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಉಡುಪಿಯ ವಿದ್ಯಾರ್ಥಿನಿಯರು ಹೈ ಕೋರ್ಟ್ ಮೆಟ್ಟಿಲೇರಿದ್ದರು.
ಹೈ ಕೋರ್ಟ್ ರಾಜ್ಯ ಸರ್ಕಾರ ಪರವಾಗಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಾದ-ವಿವಾದ ಆಲಿಸಿದ ನ್ಯಾಯಲಯ ಇಂದು ಬೆಳಗ್ಗೆ ತೀರ್ಪು ಪ್ರಕಟಿಸಲಿದೆ. ಹಿಜಾಬ್ ಸೂಕ್ಷ್ಮ ವಿಚಾರವಾಗಿದ್ದು, ಯಾವುದೇ ಗಲಭೆ, ಹಿಂಸಾಚಾರ ಅಥವಾ ಸಾವು ನೋವು ಆಗದಂತೆ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.