ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರು: ಹಿಜಾಬ್ ವಿವಾದ ಕುರಿತು ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, ಈ ವಿಚಾರವಾಗಿ ರಾಜ್ಯದ ಜನತೆ ಹಾಗೂ ತನ್ನ ಕಾರ್ಯಕರ್ತರಲ್ಲಿ ಬಿಜೆಪಿ ಪಕ್ಷ ಕೆಲವು ಮನವಿಯನ್ನು ಮಾಡಿದೆ.
ಹಿಜಾಬ್ ತೀರ್ಪು ಕುರಿತು ಯಾವುದೇ ಪ್ರತಿಭಟನೆಯನ್ನು ಮಾಡಬಾರದು. ಜೊತೆಗೆ ಪ್ರತಿಕ್ರಿಯಾತ್ಮಕ ಮಾಧ್ಯಮ ಹೇಳಿಕೆಗಳನ್ನು ನೀಡಬೇಡಿ ಎಂದು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದೆ.
ರಾಜ್ಯದ ಜನತೆಯಲ್ಲಿ ಮನವಿ.#YesToUniform_NoToHijab pic.twitter.com/sVgyk2pfnA
— BJP Karnataka (@BJP4Karnataka) March 15, 2022
ಸಾಕಷ್ಟು ವಿವಾದವನ್ನು ಹುಟ್ಟುಹಾಕಿದ್ದ ಹಿಜಾಬ್ ಕುರಿತು ಎಲ್ಲವನ್ನು ಕೂಲಂಕಷವಾಗಿ ಗಮನಿಸಿ ಹೈಕೋರ್ಟ್ ತೀರ್ಪು ನೀಡಿದ್ದು, ಎಲ್ಲರು ನ್ಯಾಯಾಲಯದ ಆದೇಶವನ್ನು ಶಾಂತವಾಗಿ ಸ್ವೀಕರಿಸಬೇಕು ಎಂದು ಮನವಿ ಮಾಡಿದೆ.
‘ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಪ್ರಕಟವಾಗಿದೆ. ನ್ಯಾಯಾಲಯದ ತೀರ್ಪನ್ನು ಎಲ್ಲ ಕಾರ್ಯಕರ್ತರು ಅತ್ಯಂತ ಸಮಚಿತ್ತದಿಂದ ಸ್ವೀಕರಿಸಬೇಕು. ಯಾವುದೇ ಅನಗತ್ಯ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ವಿಜಯೋತ್ಸವ, ಮೆರವಣಿಗೆ, ಮಾಡಬಾರದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ.
ಕಾರ್ಯಕರ್ತರಲ್ಲಿ ಮನವಿ. pic.twitter.com/AJJHN23oKw
— BJP Karnataka (@BJP4Karnataka) March 15, 2022