ಉಳ್ಳೂರಮಠ ಕ್ರಾಸ್ ಬಳಿ ಗುಡ್ಡ ಕುಸಿತ: ಕುಮಟಾ-ಸಿದ್ದಾಪುರ ರಸ್ತೆ ಸಂಚಾರ ಸ್ಥಗಿತ

ಹೊಸದಿಗಂತ ಕುಮಟಾ :

ಎಡಬಿಡದೆ ಸುರಿಯುತ್ತಿರುವ ಮಳೆಗೆ ತಾಲೂಕಿನ ಅಲ್ಲಲ್ಲಿ ಗುಡ್ಡಕುಸಿತ ಮುಂದುವರಿದಿದೆ. ಅಂಕೋಲಾದ ಶಿರೂರು, ಕುಮಟಾದ ಬರ್ಗಿ ಬಳಿಕ ಇದೀಗ ಸಿದ್ದಾಪುರ ಕುಮಟಾ ಮಾರ್ಗದ ಉಳ್ಳೂರಮಠ ಕ್ರಾಸ್ ಬಳಿ ಬೃಹತ್ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.

ಸುಮಾರು ಮುಕ್ಕಾಲು ಕಿಲೋಮಿಟರ್ ದೂರದಿಂದ ಗುಡ್ಡ ಕುಸಿದು ಬಂದು ರಸ್ತೆಯ ಮೇಲೆ ಬಿದ್ದಿದೆ. ಹಾಗೂ ಮತ್ತು ಗುಡ್ಡ ಕುಸಿಯುತ್ತಲೇ ಇದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಸುಮಾರು ಒಂದು ಎಕರೆಗೂ ಅಧಿಕ ಜಾಗದಲ್ಲಿ ಗುಡ್ಡಕುಸಿತವಾಗಿದ್ದು, ಇದರಿಂದ ಕುಮಟಾ-ಸಿದ್ದಾಪುರ ರಸ್ತೆ ಸಂಚಾರ ಸ್ಥಗಿತವಾಗಿದೆ. ಬೃಹತ್ ಪ್ರಮಾಣದಲ್ಲಿ ಮರಗಳು ರಸ್ತೆಯಲ್ಲಿ ಮೇಲೆ ಬಂದು ಬಿದ್ದಿದೆ. ಘಟನೆಯಿಂದ ಸುತ್ತಲ ಜನರು ಆತಂಕಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!