ಹೊಸದಿಗಂತ ಡಿಜಿಟಲ್ ಡೆಸ್ಕ್:
ವರುಣಾರ್ಭಟಕ್ಕೆ ಆಗುಂಬೆ ಘಾಟ್ನಲ್ಲಿ ಭೂಕುಸಿತ ಸಂಭವಿಸಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ 5ನೇ ತಿರುವಿನ ಆಗುಂಬೆ ಘಾಟ್ನಲ್ಲಿ ಗುಡ್ಡ ಕುಸಿದಿದ್ದು, ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಡಳಿತ ಆದೇಶಿಸಿದೆ.
ಕೆಲ ದಿನಗಳ ಹಿಂದೆ ಆಗುಂಬೆ ಘಾಟ್ನ ನಾಲ್ಕನೇ ತಿರುವಿನಲ್ಲಿ ತಡೆಗೋಡೆ ಕುಸಿದಿರುವ ಬಗ್ಗೆ ವರದಿಯಾಗಿತ್ತು. ಈ ಬಾರಿ 5ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು, ಈ ಹಿನ್ನೆಲೆಯಲ್ಲಿ ದೊಡ್ಡ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಮಳೆ ಮುಂದುವರಿದರೆ ಆಗುಂಬೆ ಘಟ್ಟದ ಇತರ ಭಾಗಗಳಲ್ಲಿಯೂ ಭೂಕುಸಿತವಾಗುವ ಸಾಧ್ಯತೆ ಇದೆ.