ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಸಚಿವ ಸಂಪುಟ ಇಂದು ವಿಸ್ತರಣೆಯಾಗಲಿದೆ.
ವಿಸ್ತರಣೆ ಬಳಿಕ ಮಾಜಿ ಸಿಎಂ ದಿವಗಂತ ವೀರಭಂದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್, ಹರ್ಷವರ್ಧನ್ ಚೌಹಾಣ್, ಧನಿರಾಮ್ ಶಾಂಡಿಲ್ ಸೇರಿದಂತೆ ಏಳು ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಸ್ಪಷ್ಟಪಡಿಸಿವೆ.
ಇವರೆಲ್ಲರಿಗೂ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಇಂದು ಪ್ರಮಾಣ ವಚನ ಬೋಧಿಸಲಿದ್ದಾರೆ. ಹಿಮಾಚಲ ಪ್ರದೇಶ ಸಚಿವ ಸಂಪುಟದ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಶಿಮ್ಲಾದ ರಾಜಭವನದಲ್ಲಿ ನಡೆಯಲಿದೆ.
ಶನಿವಾರದಂದು ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು ಅವರು 10 ಜನರ ಪಟ್ಟಿಯನ್ನು ಪಕ್ಷದ ಹೈಕಮಾಂಡ್ಗೆ ಸಲ್ಲಿಸಲಾಗಿದೆ ಮತ್ತು ಹಿಮಾಚಲ ಪ್ರದೇಶ ಸರ್ಕಾರವು ಮೊದಲ ಕ್ಯಾಬಿನೆಟ್ ಸಭೆಯ ನಂತರ ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಿದೆ ಎಂದು ಹೇಳಿದರು.
ನವೆಂಬರ್ 12 ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವುದಾಗಿ ಭರವಸೆ ನೀಡಿತ್ತು.