ಹೊಸದಿಗಂತ ವರದಿ ಮಡಿಕೇರಿ:
ಹಿಂದೂ ಕ್ರಿಕೆಟ್ ಕ್ಲಬ್ ವತಿಯಿಂದ ಏ.23 ಮತ್ತು 24ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಿಂದೂ ಕ್ರಿಕೆಟ್ ಕಪ್ ಪಂದ್ಯಾವಳಿ ನಡೆಯಲಿದೆ ಎಂದು ಕ್ಲಬ್ನ ಸದಸ್ಯ ವಿನಯ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದೂ ಬಾಂಧವರನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಸುಮಾರು 40ರಿಂದ 45 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು. ಜಿಲ್ಲೆಯ ಯಾವುದೇ ಭಾಗದಿಂದ ಬಂದರೂ ಹಿಂದೂ ಬಾಂಧವರ ತಂಡಗಳು ಪಾಲ್ಗೊಳ್ಳಲು ಅವಕಾಶವಿದ್ದು, ಈ ಸಂಬಂಧ ಯಾವುದಾದರೂ ಒಂದು ಗುರುತಿನ ಚೀಟಿ ಕಡ್ಡಾಯವಾಗಿರುತ್ತದೆ ಎಂದು ಮಾಹಿತಿ ನೀಡಿದರು.
ಪಂದ್ಯಾವಳಿಯಲ್ಲಿ ಗೆಲುವು ಸಾಧಿಸುವ ತಂಡಕ್ಕೆ ರೂ.44,444 ದ್ವಿತೀಯ ಬಹುಮಾನವಾಗಿ ರೂ.22,222 ತೃತೀಯ ಬಹುಮಾನವಾಗಿ ರೂ. 11,111 ನಾಲ್ಕನೇ ಬಹುಮಾನವಾಗಿ ರೂ.5,555 ನೀಡಲಾಗುತ್ತದೆ. ಜೊತೆಗೆ ಆಕರ್ಷಕ ಟ್ರೋಫಿ ನೀಡಲಾಗುವುದು.ಆಸಕ್ತ ತಂಡಗಳು ಏ.20ರ ಒಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ಪವನ್- (9880490536), ವಿನಯ್- (9900612664), ಭರತ್- (9916262689), ಕಾರ್ಯಪ್ಪ-(9449807056) ಸಂಪರ್ಕಿಸುವಂತೆ ಮನವಿ ಮಾಡಿದರು.