ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ನ ಕರ್ಣಾವತಿಯಲ್ಲಿ ಹಿಂದೂ ಧರ್ಮ ಆಚಾರ್ಯ ಮಹಾಸಭೆ ನಡೆಯುತ್ತಿದೆ.
ಮಹಾಸಭೆಯಲ್ಲಿ ಸುತ್ತೂರಿನ ಪೂಜ್ಯ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿಯ ಪೂಜ್ಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಚಿತ್ರದುರ್ಗದ ಪೂಜ್ಯ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಕನೇರಿ ಮಠದ ಪೂಜ್ಯ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.
ಸಭೆಯಲ್ಲಿ ಭಾಗವಹಿಸಿದ್ದ ಕರ್ನಾಟಕದ ಸ್ವಾಮೀಜಿಗಳಲ್ಲಿ ಪ್ರಮುಖರು, ಕರ್ನಾಟಕದ ಒಳಮೀಸಲು ಸಂಬಂಧ ರಾ.ಸ್ವ. ಸಂಘ ನೀಡಿರುವ ಸಹಕಾರವನ್ನು ಪ್ರಶಂಸಿಸಿದ್ದಾರೆಂದೂ ತಿಳಿದುಬಂದಿದೆ.