ಹೊಸದಿಗಂತ ವರದಿ, ಕಲಬುರಗಿ:
ವಿವಾದಿತ ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗಕ್ಕೆ ಮಹಾಶಿವರಾತ್ರಿ ದಿನದಂದು ಪೂಜೆ ಸಲ್ಲಿಸಲು ೧೫ ಜನ ಹಿಂದು ಮುಖಂಡರಿಗೆ ಅವಕಾಶ ನೀಡಿ ಕಲಬುರಗಿ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.
ಆಳಂದ ಪಟ್ಟಣದ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗಕ್ಕೆ ಕಳೆದ ಎರಡು ವರ್ಷಗಳಿಂದ ಹಿಂದೂಗಳು ಪೂಜೆ ಸಲ್ಲಿಸುತ್ತಿದ್ದು, ಈ ವರ್ಷವೂ ಪೂಜೆಗೆ ಅವಕಾಶ ಕಲ್ಪಿಸಬೇಕೆಂದು ಅವಕಾಶ ಕೇಳಿತ್ತು.
ಇದೀಗ ಕಲಬುರಗಿ ಹೈಕೋರ್ಟ್ ಪೀಠ ಶ್ರೀರಾಮ ಸೇನೆಯ ರಾಷ್ಟ್ರೀಯ ಗೌರವಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಸೇರಿದಂತೆ ಹದಿನೈದು ಜನ ಹಿಂದುಗಳಿಗೆ ವಿವಾದಿತ ದರ್ಗಾದಲ್ಲಿನ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ನೀಡಿ ಆದೇಶ ಹೊರಡಿಸಿದೆ.
ಇನ್ನೂ ಅದೇ ದಿನ ಶಿವರಾತ್ರಿಯಂದು ಲಾಡ್ಲೆ ಮಶಾಕ್ ದರ್ಗಾದ ಉರುಸ್ ಕಾರ್ಯಕ್ರಮವಿದ್ದು, ಇನ್ನೊಂದು ಕೋಮಿನ ೧೫ ಜನರಿಗೂ ಪೂಜೆ ಸಲ್ಲಿಸಲು ಕಲಬುರಗಿ ಹೈಕೋರ್ಟ್ ಪೀಠ ಆದೇಶ ನೀಡಿದೆ.
ಮಧ್ಯಾಹ್ನದ ನಂತರ ಹಿಂದುಗಳಿಗೆ ಪೂಜೆಗೆ ಅವಕಾಶ
ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗಕ್ಕೆ ಮಹಾಶಿವರಾತ್ರಿ ದಿನದಂದು ಪೂಜೆ ಸಲ್ಲಿಸಲು ಹಾಗೂ ಅಂದಿನ ದಿನವೇ ದರ್ಗಾದ ಉರುಸ್ ಕಾರ್ಯಕ್ರಮವಿದ್ದು,ಎರಡು ಸಮುದಾಯಗಳ ೧೫ ಜನರಿಗೆ ಪೂಜೆ ಸಲ್ಲಿಸಲು ಹೈಕೋರ್ಟ್ ಆದೇಶ ನೀಡಿದ್ದು, ಬೆಳಿಗ್ಗೆ ಮುಸ್ಲೀಂ ಬಾಂಧವರಿಗೆ ಪೂಜೆಗೆ ಅವಕಾಶ ಸಿಕ್ಕರೆ, ಮಧ್ಯಾಹ್ನದ ನಂತರ ಹಿಂದುಗಳಿಗೆ ಪೂಜೆಗೆ ಅವಕಾಶ ನೀಡಲಾಗಿದೆ.