ಹಿಂದುಸ್ಥಾನ್‌ ಜಿಂಕ್‌ ಕಾರ್ಖಾನೆ ಆಸಿಡ್‌ ಟ್ಯಾಂಕ್‌ ಸ್ಫೋಟ: ಒಬ್ಬರ ಸಾವು, 9 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ರಾಜಸ್ಥಾನದ ಚಿತ್ತೋರ್‌ಗಢ್ ಜಿಲ್ಲೆಯ ಹಿಂದೂಸ್ತಾನ್ ಜಿಂಕ್‌ ಕಾರ್ಖಾನೆಯಲ್ಲಿ ಸಿಡಿಲಿನ ಹೊಡೆತಕ್ಕೆ ಆಸಿಡ್ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೊಬ್ಬ ಸುಟ್ಟು ಕರಕಲಾಗಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ

ಹಿಂದೂಸ್ತಾನ್ ಜಿಂಕ್‌ನ ಹೈಡ್ರೊ ಪ್ಲಾಂಟ್‌ನಲ್ಲಿನ ಟ್ಯಾಂಕ್‌ಗೆ ಸಿಡಿಲು ಬಡಿದ ಪರಿಣಾಮ ಆಸಿಡ್ ಸೋರಿಕೆಯಿಂದಾಗಿ ಘಟನಾ ಸ್ಥಳದಲ್ಲಿದ್ದ ಹತ್ತು ನೌಕರರು ಸುಟ್ಟು ಕರಕಲಾಗಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೈಲಾಶ್ ಸಿಂಗ್ ಸಂಧು ತಿಳಿಸಿದ್ದಾರೆ.

ಗಾಯಗೊಂಡ ಉದ್ಯೋಗಿಗಳನ್ನು ತಕ್ಷಣವೇ ಚಿತ್ತೋರ್‌ಗಢದ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಒಬ್ಬರು ಚಿಕಿತ್ಸೆ ನೀಡುವ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇತರ ಒಂಬತ್ತು ಮಂದಿಯನ್ನು ಚಿಕಿತ್ಸೆಗಾಗಿ ಉದಯಪುರಕ್ಕೆ ಕಳುಹಿಸಲಾಗಿದೆ. ಮೃತರ ಗುರುತು ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!