ದೇಶದ ಭದ್ರತೆಗೆ ಸವಾಲಾಗಿದ್ದ ಪಿಎಫ್‌ಐ ನಿಷೇಧ ಐತಿಹಾಸಿಕ ನಿರ್ಧಾರ: ಸಚಿವ ಸೋಮಶೇಖರ್‌ ಶ್ಲಾಘನೆ

ಹೊಸದಿಗಂತ ವರದಿ, ಮೈಸೂರು:
ದೇಶದ ಆಂತರಿಕ ಭದ್ರತೆಗೆ ಸವಾಲೊಡ್ಡಿ, ವಿಧ್ವಂಸಕ ಕೃತ್ಯಗಳಿಗೆ ಸಂಚುಗಳನ್ನು ರೂಪಿಸಿ, ಸಾರ್ವಜನಿಕರ ಶಾಂತಿಗೆ ಭಂಗ, ತರುತ್ತಿದ್ದ ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ಒಂದು ಐತಿಹಾಸಿಕ ಕ್ರಮವಾಗಿದೆ.
ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿಷೇಧ ಕ್ರಮ ಕೈಗೊಂಡಿದೆ. ಈ ಸಂಘಟನೆಗೆ ನಿಷೇಧ ಹೇರಬೇಕು ಎಂಬುದು ದಶಕಗಳ ಬೇಡಿಕೆಯಾಗಿತ್ತು ಎಂದು ಸೋಮಶೇಖರ್‌ ಹೇಳಿದ್ದಾರೆ.

“ಈ ಸಂಘಟನೆಗಳ ನಿಷೇಧದಿಂದ ಸಮಾಜಘಾತುಕ ಶಕ್ತಿಗಳಿಗೆ ದೇಶದಲ್ಲಿ ಉಳಿಗಾಲ ಇರುವುದಿಲ್ಲ ಎಂಬ ಸಂದೇಶ ರವಾನೆಯಾಗಿದೆ. ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನದಂದೇ ಕೈಗೊಂಡಿರುವ ಈ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಗೃಹ ಸಚಿವರಾದ ಅಮಿಶ್ ಷಾ ಅವರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ”.
ಎಸ್.ಟಿ.ಸೋಮಶೇಖರ್
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!