ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನ ವರ್ಲಿಯಲ್ಲಿ ಮಹಿಳೆಯ ಸಾವಿಗೆ ಕಾರಣವಾದ ಬಿಎಂಡಬ್ಲ್ಯು ಕಾರು ಹಿಟ್ ಆಂಡ್ ರನ್ ಪ್ರಕರಣದಲ್ಲಿ ದಾದರ್ ಸೆವ್ರಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆರೋಪಿ ಮಿಹಿರ್ ಶಾ ಅವರ ಅಪ್ಪ ಶಿವಸೇನಾ ನಾಯಕ ರಾಜೇಶ್ ಶಾಗೆ15,000 ನಗದು ಪಾವತಿಸಿ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ.
ಇದೇ ನ್ಯಾಯಾಲಯವು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ಕೂಡಲೇ ಆರೋಪಿಯ ತಂದೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ವರ್ಲಿಯಲ್ಲಿ ಮಹಿಳೆಯ ಸಾವಿಗೆ ಕಾರಣವಾದ ಹಿಟ್ ಅಂಡ್ ರನ್ ಘಟನೆಯಲ್ಲಿ ಭಾಗಿಯಾಗಿದ್ದ ಮಿಹಿರ್ ಶಾ ಘಟನಾ ಸ್ಥಳದಿಂದ ಪರಾರಿಯಾಗಲು ಸಹಾಯ ಮಾಡಿದ್ದಕ್ಕಾಗಿ ಅವರನ್ನು ಬಂಧಿಸಲಾಗಿದೆ.
ದ್ವಿಚಕ್ರ ವಾಹನಕ್ಕೆ ಬಿಎಂಡಬ್ಲ್ಯೂ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕಾರನ್ನು ಸಿಎಂ ಏಕನಾಥ್ ಶಿಂಧೆ ಅವರ ಶಿವಸೇನೆಯ ನಾಯಕರೊಬ್ಬರ ಪುತ್ರ ಮಿಹಿರ್ ಶಾ ಚಲಾಯಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಶಾ ಮತ್ತು ಬಿದತ್ ಮರೀನ್ ಡ್ರೈವ್ ನಲ್ಲಿ ಲಾಂಗ್ ಡ್ರೈವ್ ನಿಂದ ಮನೆಗೆ ಮರಳುತ್ತಿದ್ದರು.
ಮಹಿಳೆಯನ್ನು ಕೊಂದ ಹಿಟ್ ಅಂಡ್ ರನ್ ಪ್ರಕರಣದ ಆರೋಪಿ ಮಿಹಿರ್ ಶಾ ಅವರ ತಂದೆ ರಾಜೇಶ್ ಶಾ ಅಪಘಾತದ ನಂತರ ತನ್ನ 24 ವರ್ಷದ ಮಗನಿಗೆ ಹಲವಾರು ಕರೆಗಳನ್ನು ಮಾಡಿದ್ದಾರೆ ಎಂದು ವರ್ಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.