ಹಿಟ್ ಆಂಡ್ ರನ್ ಪ್ರಕರಣ: ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ಶಾ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈ ಬಿಎಂಡಬ್ಲ್ಯು ಹಿಟ್ ಅಂಡ್ ರನ್ ಪ್ರಕರಣದ ಆರೋಪಿ ಮಿಹಿರ್ ಶಾ ಅವರ ತಂದೆ ರಾಜೇಶ್ ಶಾ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶಿವಸೇನೆಯ ಉಪ ನಾಯಕ ಸ್ಥಾನದಿಂದ ವಜಾಗೊಳಿಸಿದ್ದಾರೆ.

45 ವರ್ಷದ ಮಹಿಳೆ ಕಾವೇರಿ ನಖ್ವಾ ಅವರ ಸಾವಿಗೆ ಕಾರಣವಾದ ಹಿಟ್ ಅಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾ ಅವರನ್ನು ಮುಂಬೈ ಪೊಲೀಸರು ಮಂಗಳವಾರ ವಿರಾರ್‌ನಿಂದ ಬಂಧಿಸಿದ್ದಾರೆ.

ಜುಲೈ 7, ಭಾನುವಾರದಂದು ವರ್ಲಿಯ ಡಾ. ಅನ್ನಿ ಬೆಸೆಂಟ್ ರಸ್ತೆಯಲ್ಲಿ ಅವರು ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ನಂತರ ಅವರು ತಲೆಮರೆಸಿಕೊಂಡಿದ್ದರು. ಅವರನ್ನು ಬಂಧಿಸಲು ಮುಂಬೈ ಪೊಲೀಸರು ಹದಿನಾಲ್ಕು ತಂಡಗಳನ್ನು ರಚಿಸಿದ್ದರು.

ಅಪಘಾತದ ಸಮಯದಲ್ಲಿ ಬಿಎಂಡಬ್ಲ್ಯು ಕಾರಿನಲ್ಲಿದ್ದ ರಾಜೇಶ್ ಶಾ ಮತ್ತು ಅವರ ಚಾಲಕ ರಾಜಋಷಿ ಸಿಂಗ್ ಬಿಡಾವತ್ ಅವರನ್ನು ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ನಂತರ ಮುಂಬೈನ ನ್ಯಾಯಾಲಯ ರಾಜೇಶ್ ಶಾಗೆ ಜಾಮೀನು ನೀಡಿತ್ತು.

ಆರೋಪಿಗಳು ತಮ್ಮ ನಾಯಕನ ಮಗನಾಗಿರುವುದರಿಂದ ಶಿವಸೇನೆ ಏನೂ ಮಾಡುವುದಿಲ್ಲ ಎಂದು ಹಿಟ್ ಅಂಡ್ ರನ್ ಪ್ರಕರಣದ ಸಂತ್ರಸ್ತೆಯ ಪತಿ ಪ್ರದೀಪ್ ನಖ್ವಾ ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!