ಹೊಸದಿಗಂತ ವರದಿ, ಯಲ್ಲಾಪುರ:
ರಾಷ್ಟ್ರೀಯ ಹೆದ್ದಾರಿ 63 ರ ಅರಬೈಲ್ ಘಟ್ಟದಲ್ಲಿ ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದು ಹೋಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೈಕ್ ಸವಾರನನ್ನು ಕಲ್ಲೇಶ್ವರದ ಗುರುಪ್ರಸಾದ ಗಾಂವ್ಕರ್ ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಿಟ್ ಆಂಡ್ ರನ್ ಪ್ರಕರಣ ದಾಖಲಾಗಿದೆ.