ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನಕ್ಕೆ ಜೈಕಾರ ಹಾಕೋರಿಗೆ ಚಪ್ಪಲಿಯಿಂದ ಹೊಡೆಯಿರಿ, ಅವರ ಪರವಾಗಿ ನಾನು ಇರುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಸವ ಜಯಂತಿಯನ್ನು ಬಸವಣ್ಣನ ಜನ್ಮಭೂಮಿ ಬಸವನ ಬಗೇವಾಡಿಯಲ್ಲಿ ಮಾಡಬೇಕೆಂಬ ಒತ್ತಾಯ ವಿಚಾರವಾಗಿ, ಸರ್ಕಾರ ಬಸವನ ಬಾಗೇವಾಡಿ, ಕೂಡಲಸಂಗಮ, ಬಸವ ಕಲ್ಯಾಣ ಮೂರು ಕಡೆ ಬಸವ ಜಯಂತಿ ಮಾಡಬೇಕಿದೆ. ಈ ಬಾರಿ ಕೂಡಲಸಂಗಮದಲ್ಲಿ ಮಾಡುವುದರ ಬಗ್ಗೆ ಆಕ್ಷೇಪಣೆ ಇಲ್ಲ. ಬಸವನ ಬಾಗೇವಾಡಿಯಲ್ಲಿ ಮಾಡದಿರಲು ಅಯೋಗ್ಯ ನಾಲಾಯಕರ ಬಗ್ಗೆ ಧಿಕ್ಕಾರ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ವಿರುದ್ಧ ನಡೆಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡವರು ಯಾರಾದರೂ ಭಾರತ ಮಾತಾಕಿ ಜೈ ಅಂದ್ರಾ, ಪಾಕಿಸ್ತಾನಕ್ಕೆ ಧಿಕ್ಕಾರ ಕೂಗಿದ್ದಾರಾ? ಪಾಕಿಸ್ತಾನಕ್ಕೆ ಜೈಕಾರ ಹಾಕುವವರಿಗೆ ಚಪ್ಪಲಿಯಿಂದ ಹೊಡೆಯಿರಿ. ಅವರ ಪರವಾಗಿ ನಾನು ವಕಾಲತ್ತು ನೋಡಿಕೊಳುತ್ತೇನೆ ಎಂದು ಕಿಡಿಕಾರಿದ್ದಾರೆ.