ಹೊಸದಿಗಂತ ವರದಿ ಅಂಕೋಲಾ:
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ವತಿಯಿಂದ ತಾಲೂಕಿನ ಬೆಲೇಕೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ ನಡೆಸಲಾಯಿತು.
ಭಾರತೀಯ ತ್ರಿವರ್ಣಧ್ವಜವನ್ನು ಕೈಯಲ್ಲಿ ಹಿಡಿದು ಭಾರತ ಮಾತೆಗೆ ಜಯಕಾರ ಕೂಗುತ್ತ ಬೆಲೇಕೇರಿಯಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು.
ಇದನ್ನೂ ಓದಿ:
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರತಿ ಮನೆಗಳಲ್ಲಿ ಧ್ವಜ ಹಾರಿಸುವ ಮೂಲಕ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದ ಎನ್.ಡಿ.ಆರ್.ಎಫ್ ಸಿಬ್ಬಂದಿಗಳು ರಾಷ್ಟ್ರಧ್ವಜ ಹಾರಿಸುವಾಗ ಧ್ವಜದ ಗೌರವಕ್ಕೆ ದಕ್ಕೆಯಾಗದಂತೆ ಪಾಲಿಸಬೇಕಾದ ನಿಯಮಗಳನ್ನು ತಿಳಿಸಿದರು.
ಬೆಲೇಕೇರಿಯ ಶಾಲಾ ವಿದ್ಯಾರ್ಥಿಗಳು,ಗ್ರಾಮಸ್ಥರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.



