ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಹಾಗೂ ಅವರ ಪುತ್ರ ಸೂರ್ಯ ಅವರಿಗೆ ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆ ಪತ್ರ ಬಂದಿದೆ.
ಸಿ.ಟಿ.ರವಿ ಸ್ವಗೃಹಕ್ಕೆ ಅನಾಮಧೇಯ ವ್ಯಕ್ತಿಯೊಬ್ಬರು ಪತ್ರ ಕಳುಹಿಸಿದ್ದಾರೆ. 15 ದಿನದೊಳಗೆ ಚಿಕ್ಕಮಗಳೂರಿನಿಂದ ಬೆಳಗಾವಿಗೆ ಬಂದು ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳುವಂತೆ ಪತ್ರದಲ್ಲಿ ತಿಳಿಸಲಾಗಿದೆ. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ಸಾಯಿಸುತ್ತೇವೆ. ನಿನ್ನ ಕೈಕಾಲು ಮುರಿಯುತ್ತೇವೆ, ಪ್ರಾಣ ತೆಗೆಯುತ್ತೇವೆ ಮತ್ತು ನಿನ್ನ ಮಗನನ್ನೂ ಕೊಲ್ಲುತ್ತೇವೆ. ಹುಷಾರ್… ಹುಷಾರ್… ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಸಿ.ಟಿ.ರವಿ ಚಿಕ್ಕಮಗಳೂರಿನ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕೋರಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.