ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಭದ್ರತೆಗೆ ನೇಮಕಗೊಂಡಿದ್ದ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.
ಸಚಿವರ ಮನೆ ಮುಂದೆಯೇ ಪೊಲೀಸ್ ಕಾನ್ಸ್ ಟೇಬಲ್ ಚಾಕುವಿನಿಂದ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.ತಕ್ಷಣ ಗಮನಿಸಿದ ಇತರ ಪೊಲೀಸ್ ಸಿಬ್ಬಂದಿಗಳು ನವೀನ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಏಕಾಏಕಿ ನವೀನ್ ಆತ್ಮಹತ್ಯೆಗೆ ಯತ್ನಿಸಿರುವುದರ ಹಿಂದಿನ ಕಾರಣ ತಿಳಿದುಬಂದಿಲ್ಲ.