ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ: ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಹಾಗೂ ಗಲಭೆಯಲ್ಲಿ ಕಲ್ಲು ತೂರಾಟ ನಡೆಸಿದ ದಿಡ್ಡಿ ಓಣಿ ಹನುಮಂತ ದೇವಸ್ಥಾನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಕಾನೂನು ಕೈಗೆತ್ತಿಕೊಳ್ಳುವ ಪ್ರಯತ್ನ ಮಾಡಿದವರು ಯಾರೇ ಆಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಯುವಕನೊಬ್ಬ ವಾಟ್ಸ್‌ಆಯಪ್​​ನಲ್ಲಿ ಸ್ಟೇಟಸ್​ ಹಾಕಿಕೊಂಡಿದ್ದಕ್ಕೆ ಪೊಲೀಸರು ಅವನನ್ನು ಕೂಡಲೇ ಬಂಧಿಸಿದ್ದರು ನೂರಾರು ಜನರು ಸೇರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಲ್ಲದೆ ಯುವಕನನ್ನು ಒಪ್ಪಿಸಿರಿ ಎಂದು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ನಂತರ ಅವರ ವಾಹನಗಳನ್ನು ಜಖಂ ಮಾಡಿ ಓಣಿಗಳಲ್ಲಿ ಕಲ್ಲು ತೂರಾಟ ಮಾಡಿ ಅರಾಜಕತೆ ಉಂಟು ಮಾಡಿದ್ದಾರೆ. ಇದನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ.ಕಾನೂನು ಕೈಗೆ ತೆಗೆದುಕೊಳ್ಳುತ್ತೇನೆ ಎಂಬುವವರ ದುರಾಲೋಚನೆ ಇಲ್ಲಿ ನಡೆಯೋದಿಲ್ಲ. ಕಾನೂನು ಮತ್ತು ಸಂವಿಧಾನ ಯಾರು ಉಲ್ಲಂಘನೆ ಮಾಡುತ್ತಾರೋ ಅವರು ಈ ದೇಶದ ನಾಗರಿಕರಲ್ಲ. ಆ ಕಾರಣಕ್ಕಾಗಿ ಸರಿಯಾದ ಕ್ರಮ ಕೈಗೊಳ್ಳಲು ಪೊಲೀಸರಿಗೆ ತಿಳಿಸಲಾಗಿದೆ. ಈಗಾಗಲೇ ಕೆಲ ಕಿಡಿಗೇಡಿಗಳನ್ನು ಬಂಧಿಸಲಾಗಿದೆ. ಈ ಕುರಿತು ತನಿಖೆ ನಡೆದಿದೆ. ಅವರು ಯಾರೇ ಆಗಲಿ ಕಠಿಣ ಶಿಕ್ಷೆ ನೀಡಲಾಗುವುದು ಎಂದರು.
ಈ ಘಟನೆಯಲ್ಲಿ ಯಾವ ಸಂಘಟನೆಗಳಿವೆ. ಅವನ್ನೆಲ್ಲ ಹೊರಗೆ ತರುತ್ತೇವೆ. ಮುಂದೆ ಎಲ್ಲಾ ಧರ್ಮದವರು ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ತೊಂದರೆಯಾದಲ್ಲಿ ಸರ್ಕಾರವಿದೆ, ಪೋಲೀಸರಿದ್ದಾರೆ. ಅವರು ಯಾವ ರೀತಿ ಕಾನೂನು ಕ್ರಮ ಕೈಗೊಳ್ಳುತ್ತಾರೆ ಅವರಿಗೆ ಬಿಟ್ಟದ್ದು. ಏಕಾಏಕಿ ಗಲಭೆ ನಡೆದಿದ್ದು, ಹೀಗಾಗಿ ಇಂಟಲಿಜೆನ್ಸ್ ವೈಫಲ್ಯ ಎನ್ನುವಂತಿಲ್ಲ. ಇನ್ನು ಇದು ಪೂರ್ವಯೋಜಿತ ಗಲಾಟೆಯೇ ಎಂಬುದರ ಬಗ್ಗೆ ತನಿಖೆ ನಂತರ ತಿಳಿಯುತ್ತದೆ ಎಂದು ಗೃಹಸಚಿವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!