ಭೂತಾನ್‌ನಿಂದ ಅಡಕೆ ಆಮದು: ಆತಂಕ ಬೇಡ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ

ಹೊಸದಿಗಂತ ವರದಿ ಶಿವಮೊಗ್ಗ:

ನೆರೆಯ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ನಮ್ಮ ದೇಶದಿಂದ ಭೂತಾನ್‌ಗೆ, ಸಂಸ್ಕರಿತ ಅಡಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದೆ. ಭೂತಾನ್ ನಿಂದ ಕೇವಲ ಹಸಿ ಅಡಕೆಗೆ ಮಾತ್ರ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಜೊತೆಗೆ ನೆರೆಯ ಭೂತಾನ್, ಭಾರತದ ಪರಂಪರಾಗತ ಮಿತ್ರ ದೇಶವಾಗಿದೆ. ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ. ಅಡಕೆ ಮಾರುಕಟ್ಟೆಯಲ್ಲಿ, ಸ್ಥಿರತೆಯನ್ನು ಕಾಯ್ದುಕೊಳ್ಳಲು, ಕೇಂದ್ರ ಸರಕಾರದ ಜತೆಗೆ ಸತತ ಸಂಪರ್ಕದಲ್ಲಿದ್ದೇವೆ. ಭೂತಾನ್ ಅಡಕೆ ಆಮದು ವಿಚಾರವಾಗಿಯೂ ಮಾತುಕತೆ ನಡೆಸಲಾಗುವುದು. ಬೆಳೆಗಾರರಿಗೆ ಯಾವುದೇ ಗೊಂದಲ ಆತಂಕ ಬೇಡ ಎಂದರು.

ಈ ವಿಚಾರ ಕುರಿತು ಕೇಂದ್ರಕ್ಕೆ ಮನವರಿಕೆ ಮಾಡಿ ಕೊಡಲು ಲೋಕಸಭಾ ಸದಸ್ಯರ ನೇತೃತ್ವದಲ್ಲಿ ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂಬುದಾಗಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!