ಹೊಸದಿಗಂತ ಡಿಜಿಟಲ್ ಡೆಸ್ಕ್:
ಸದನದಲ್ಲಿ ಹನಿಟ್ರ್ಯಾಪ್ ಕುರಿತು ಮಾತನಾಡಿದ್ದ ಸಚಿವ ಕೆ.ಎನ್ ರಾಜಣ್ಣ ವಿರುದ್ಧ ಕೋರ್ಟ್ಗೆ ದೂರು ನೀಡಲು ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಮುಂದಾಗಿದ್ದಾರೆ. ಮಾತ್ರವಲ್ಲ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ಸದನದಲ್ಲಿ ಸಚಿವ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಕುರಿತು ಮಾತನಾಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳುವಂತೆ ಸಚಿವರ ವಿರುದ್ಧ ದೂರು ಕೊಟ್ಟರೂ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಿರುವುದರಿಂದ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲು ರಾಜ್ಯಪಾಲರಿಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದಾಗಿ ಭೀಮಪ್ಪ ಗಡಾದ ತಿಳಿಸಿದ್ದಾರೆ.
ಸದನವನ್ನು ಪ್ರಜಾಪ್ರಭುತ್ವದ ದೇಗುಲವೆಂದು ಕರೆಯಲ್ಪಡುತ್ತದೆ. ಸದನದಲ್ಲಿ ಹನಿಟ್ರ್ಯಾಪ್ ವಿಷಯವನ್ನು ಪ್ರಸ್ತಾಪಿಸಿ ಗೌಪ್ಯತೆ ಪಾಲನೆ ಮಾಡಿಲ್ಲ. ಸಂವಿಧಾನಕ್ಕೆ ಅಪಚಾರ ಎಸಗಿದ್ದು ಮತ್ತು ಇಂತಹ ಅಶ್ಲೀಲ ಹೇಳಿಕೆಯಿಂದ ಸಂವಿಧಾನದ ಘನತೆ ಗೌರವಗಳಿಗೆ ಚ್ಯುತಿ ಬಂದಿದೆ. ಎಂದು ಭೀಮಪ್ಪ ಆರೋಪಿಸಿದರು.