ಸಿಎಂ ಕುರ್ಚಿಗಾಗಿ ಹನಿಟ್ರ‍್ಯಾಪ್ ಗಿಮಿಕ್: ವಿಪಕ್ಷ ನಾಯಕ ಅಶೋಕ್‌ ಗಂಭೀರ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಕುರ್ಚಿಗಾಗಿ ಹನಿಟ್ರ‍್ಯಾಪ್ ಗಿಮಿಕ್ ನಡೆದಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜಣ್ಣ ಸಾಮಾನ್ಯ ವ್ಯಕ್ತಿಯಲ್ಲ. ಸರ್ಕಾರದ ಮಂತ್ರಿಯಾಗಿದ್ದಾರೆ. ಅವರೇ ಸದನದಲ್ಲಿ ಆರೋಪ ಮಾಡಿದ್ದಾರೆ. ಅವರೇ ಸದನದಲ್ಲಿ 48 ಜನರ ಮೇಲೆ ಹನಿಟ್ರ‍್ಯಾಪ್ ಆಗಿದೆ ಅಂದಿದ್ದಾರೆ. ಈ ಆರೋಪಕ್ಕೆ ಸಿಎಂ ಸರಿಯಾಗಿ ಉತ್ತರ ನೀಡಿಲ್ಲ.

ಇದು ಎಲ್ಲಾ ಶಾಸಕರ, ಸದನದ, ರಾಜ್ಯದ ಗೌರವದ ಪ್ರಶ್ನೆ. ಸಿಬಿಐ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಈ ಬಗ್ಗೆ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಆಗ್ರಹಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!