ಹೊಸದಿಗಂತ ಡಿಜಿಟಲ್ ಡೆಸ್ಕ್:
ಹನಿಟ್ರ್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ಆಗ್ರಹಿಸಬೇಕೆಂದು ವಿಪಕ್ಷಗಳ ಸದಸ್ಯರು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಮೇಲೆ ಪೇಪರ್ ಎಸೆದು ತಮ್ಮ ಸಿಟ್ಟು ಹೊರಹಾಕಿದ್ದಾರೆ.
ಇಂದು ವಿಧಾನಸಭೆಯ ಅಧಿವೇಶನದ ಕಡೆಯ ದಿನ. ವಿಧಾನಸಭೆ ಆರಂಭಗೊಳ್ಳುತ್ತಿದ್ದಂತೆ ಅಶೋಕ್ ಮತ್ತು ಸುನಿಲ್ ಕುಮಾರ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಸದಸ್ಯರು ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಮಸೂದೆಗಳ ಪ್ರತಿಯನ್ನು ಸ್ಪೀಕರ್ ಮೇಲೆ ಎಸೆದು ಸಿಟ್ಟು ಪ್ರದರ್ಶಿಸಿದ್ದಾರೆ. ಗದ್ದಲ ಜಾಸ್ತಿ ಆಗುತ್ತಿದ್ದಂತೆ ಖಾದರ್ ಕಲಾಪವನ್ನು ಮುಂದೂಡಿದ್ದಾರೆ.