ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೋಪ್ ಸೋ ಮುಂದಿನ ವರ್ಷವೂ ನಾನೇ ಪುಷ್ಪಾರ್ಚನೆ ಮಾಡ್ಬಹುದು? ಎನ್ನುವ ಮೂಲಕ ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ಇರುತ್ತೇನೆ ಎಂದು ಸಿದ್ದರಾಮಯ್ಯ ಪುನರಾಚ್ಚರಿಸಿದ್ದಾರೆ.
ಎರಡನೇ ಬಾರಿ ಸಿಎಂ ಆಗಲ್ಲ ಅಂದಿದ್ದರು. ನಾನು ಸಿಎಂ ಆಗಲಿಲ್ವಾ? ಬಹಳ ಜನ ಬಹಳಷ್ಟು ಹೇಳುತ್ತಾರೆ, ಹೇಳಲಿ. ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಮತ್ತು ಅವರು ಹೇಳಿದಂತೆ ಕೇಳಬೇಕು. ಬಿಜೆಪಿಗೆ ವಸ್ತು ಸ್ಥಿತಿ ಗೊತ್ತಿಲ್ಲ. ಅವರು ಹೇಳಿದ್ದು ಏನು ನಡೆಯುವುದಿಲ್ಲ. ಬಿಜೆಪಿ ಹೇಳಿದ್ದೆಲ್ಲಾ ಸುಳ್ಳಾಗಿದೆ ಎಂದು ಟಾಂಗ್ ಕೊಟ್ಟಿದ್ದಾರೆ.