ಹೊಸದಿಗಂತ ಡಿಜಿಟಲ್ ಡೆಸ್ಕ್
ನಿರೀಕ್ಷೆ ಸುಳ್ಳಾಗಿದೆ. ಭಾರೀ ಮಳೆ ಸುರಿಯುತ್ತಿರುವ ಮಧ್ಯೆಯೆ ಸುಬ್ರಹ್ಮಣ್ಯದಲ್ಲಿ ನಡೆದ ದುರಂತದಲ್ಲಿ ಮಣ್ಣಿನಡಿ ಸಿಲುಕಿರುವ ಇಬ್ಬರು ಮಕ್ಕಳ ಮೃತಪಟ್ಟಿರುವುದು ಖಚಿತವಾಗಿದೆ.
ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿದ್ದು ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳಾದ ಶ್ರುತಿ (11) ಹಾಗೂ ಜ್ಞಾನ ಶ್ರೀ (6) ಅವರ ಮೃತದೇಹವನ್ನು ರಕ್ಷಣಾ ಕಾರ್ಯಚರಣೆ ಮೂಲಕ ಹೊರತೆಗೆಯಲಾಯಿತು.
ಮನೆಯಲ್ಲಿ ಐದು ಜನರಿದ್ದರು ಎನ್ನಲಾಗಿದ್ದು ಘಟನೆ ವೇಳೆ ಮೂವರು ಹೊರಗೋಡಿ ಪಾರಾಗಿದ್ದು, ಇಬ್ಬರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.