ಭೀಕರ ಅಪಘಾತ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಆರು ಮಂದಿ ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲಂಗಾಣ ರಾಜ್ಯದ ಸೂರ್ಯಪೇಟ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೈದರಾಬಾದ್‌ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಖ್ಯರಸ್ತೆಯಲ್ಲಿ ಟ್ರಕ್ ಕೆಟ್ಟು ನಿಂತಿತ್ತು ಮತ್ತು ಚಾಲಕ ರಸ್ತೆಯ ಬದಿ ನಿಲ್ಲಿಸಿದ್ದ. ಎಕ್ಸ್‌ಎಲ್ 6 ಕಾರಿನಲ್ಲಿ 8 ಮಂದಿ ಪ್ರಯಾಣಿಕರಿದ್ದು, ಹೈದರಾಬಾದ್‌ನಿಂದ ವಿಜಯವಾಡಕ್ಕೆ ತೆರಳುತ್ತಿದ್ದರು.

ವೇಗವಾಗಿ ಚಲಿಸುತ್ತಿದ್ದ ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಅದರಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದು. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!