ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯ ಸೈನಿಕ ತರಬೇತಿ ಶಾಲೆಗೆ ಹೋಗುತ್ತಿದ್ದ ಇಬ್ಬರು ಯುವಕರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕ್ರೂಸರ್ ಹಾಗೂ ಬೈಕ್ ಮುಖಾ ಮುಖಿ ಡಿಕ್ಕಿಯಾಗಿ ಯುವಕರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗರಲಗುಂಜಿ ಬಳಿ ಈ ದುರಂತ ಸಂಭವಿಸಿದ್ದು, ಬೈಕ್ ನಲ್ಲಿದ್ದ 20 ವರ್ಷದ ರಾಮಲಿಂಗ ಮುತ್ಗೇಕರ್ ಹಾಗೂ ಹನುಮಂತ ಪಾಟೀಲ್ ಮೃತ ದುರ್ದೈವಿಗಳು.
ಬೇಕ್ವಾಡ ಗ್ರಾಮದವರಾದ ಇಬ್ಬರೂ ನಂದಿಹಾಳ ಗ್ರಾಮಕ್ಕೆ ಸೈನಿಕ ತರಬೇತಿ ಶಾಲೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿ ಇಬ್ಬರೂ ಅಸುನೀಗಿದ್ದಾರೆ.