ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಬಿಕೇರ್ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು,ಒಂದೇ ಕುಟುಂಬದ ಆರು ಮಂದಿ ದುರ್ಮರಣ ಹೊಂದಿದ್ದಾರೆ.
ಬಿಕಾನೇರ್ನ ಮಹಾಜನ್ನ ಜೈತ್ಪುರ ಟೋಲ್ ಬಳಿ ಅಪಘಾತ ಸಂಭವಿಸಿದೆ. ಹನುಮಾನ್ಗಢ್ನ ದಬ್ವಾಲಿ ನಿವಾಸಿಗಳಾಗಿದ್ದು, ಹರ್ಯಾಣದ ನಂಬರ್ ಪ್ಲೇಟ್ ಹೊಂದಿರುವ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಮೃತರನ್ನು ಆರತಿ, ದುಬ್ಬು, ಭೂಮಿಕಾ, ನೀರಜ್ ಕುಮಾರ್ ಮತ್ತು ಶಿವಕುಮಾರ್ ಎಂದು ಗುರುತಿಸಲಾಗಿದೆ.
ಅಪಘಾತದ ವೇಳೆ ಇಬ್ಬರು ಪ್ರಯಾಣಿಕರು ಕಾರಿನಿಂದ ಹೊರಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಇಡೀ ಕುಟುಂಬ ಪ್ರಾಣ ಕಳೆದುಕೊಂಡಿದೆ. ಹನುಮಾನ್ಗಢದಿಂದ ಬಿಕಾನೇರ್ ಕಡೆಗೆ ಹೋಗುತ್ತಿದ್ದ ಕಾರೊಂದು ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ, ಆ ರಭಸಕ್ಕೆ ಕಾರು ಹಾರಿ ಹೋಗಿತ್ತು.
ಮಹಾಜನ್ ಪೊಲೀಸರು, ಜಿಲ್ಲಾಧಿಕಾರಿ ಹಾಗೂ ಎಸ್ಪಿ ಸ್ಥಳಕ್ಕೆ ಆಗಮಿಸಿದ್ದಾರೆ. ಕಾರು ವೇಗವಾಗಿತ್ತು ಅಷ್ಟೇ ಅಲ್ಲದೆ ರಾತ್ರಿಯಾಗಿತ್ತು, ಚಾಲಕನಿಗೆ ಟ್ರಕ್ ಮುಂದೆ ಹೋಗುತ್ತಿರುವುದು ಕಾಣಿಸಿರಲಿಲ್ಲ. ಇದರಿಂದಾಗಿ ಅವಘಡ ಸಂಭವಿಸಿದೆ.