ರಾಜಸ್ಥಾನದ ಬಿಕೇರ್‌ನಲ್ಲಿ ಭೀಕರ ಅಪಘಾತ,ಒಂದೇ ಕುಟುಂಬದ ಆರು ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಸ್ಥಾನದ ಬಿಕೇರ್‌ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು,ಒಂದೇ ಕುಟುಂಬದ ಆರು ಮಂದಿ ದುರ್ಮರಣ ಹೊಂದಿದ್ದಾರೆ.

ಬಿಕಾನೇರ್​ನ ಮಹಾಜನ್​ನ ಜೈತ್​ಪುರ ಟೋಲ್​ ಬಳಿ ಅಪಘಾತ ಸಂಭವಿಸಿದೆ. ಹನುಮಾನ್‌ಗಢ್‌ನ ದಬ್ವಾಲಿ ನಿವಾಸಿಗಳಾಗಿದ್ದು, ಹರ್ಯಾಣದ ನಂಬರ್​ ಪ್ಲೇಟ್ ಹೊಂದಿರುವ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಮೃತರನ್ನು ಆರತಿ, ದುಬ್ಬು, ಭೂಮಿಕಾ, ನೀರಜ್ ಕುಮಾರ್ ಮತ್ತು ಶಿವಕುಮಾರ್ ಎಂದು ಗುರುತಿಸಲಾಗಿದೆ.

ಅಪಘಾತದ ವೇಳೆ ಇಬ್ಬರು ಪ್ರಯಾಣಿಕರು ಕಾರಿನಿಂದ ಹೊರಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಇಡೀ ಕುಟುಂಬ ಪ್ರಾಣ ಕಳೆದುಕೊಂಡಿದೆ. ಹನುಮಾನ್​ಗಢದಿಂದ ಬಿಕಾನೇರ್​ ಕಡೆಗೆ ಹೋಗುತ್ತಿದ್ದ ಕಾರೊಂದು ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದಿದೆ, ಆ ರಭಸಕ್ಕೆ ಕಾರು ಹಾರಿ ಹೋಗಿತ್ತು.

ಮಹಾಜನ್ ಪೊಲೀಸರು, ಜಿಲ್ಲಾಧಿಕಾರಿ ಹಾಗೂ ಎಸ್ಪಿ ಸ್ಥಳಕ್ಕೆ ಆಗಮಿಸಿದ್ದಾರೆ. ಕಾರು ವೇಗವಾಗಿತ್ತು ಅಷ್ಟೇ ಅಲ್ಲದೆ ರಾತ್ರಿಯಾಗಿತ್ತು, ಚಾಲಕನಿಗೆ ಟ್ರಕ್ ಮುಂದೆ ಹೋಗುತ್ತಿರುವುದು ಕಾಣಿಸಿರಲಿಲ್ಲ. ಇದರಿಂದಾಗಿ ಅವಘಡ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!