ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯ್ಯಪ್ಪಸ್ವಾಮಿ ದರುಶನಕ್ಕೆ ಹೊರಟಿದ್ದ ಮಾಲಾಧಾರಿಗಳ ಕಾರ್ ಭೀಕರ ಅಪಘಾತಕ್ಕೀಡಾಗಿದೆ.
ಇಬ್ಬರು ಮಾಲಾಧಾರಿಗಳು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಗದಗದಿಂದ ಕೇರಳಕ್ಕೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿದ್ದ ಡಿವೈಡರ್ಗೆ ಡಿಕ್ಕಿಯಾಗಿದೆ.
ಇದರಿಂದಾಗಿ ಚೆನ್ನು ಪಾಟೀಲ್ ಹಾಗೂ ಯುವರಾಜ ಎನ್ನುವವರು ಮೃತಪಟ್ಟಿದ್ದಾರೆ. ಮಂಜು, ವೀರಣ್ಣ ಹಾಗೂ ಚಿದಂಬರಂ ಎನ್ನುವವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.