ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರದಲ್ಲಿ ಭೀಕರ ಅಪಘಾತವಾಗಿದ್ದು, ಕಾರಿಗೆ KSRTC ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ಇಂದು ಸಂಜೆ ನಡೆದಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ .
ಘಟನ ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.